ಬ್ರೇಕಿಂಗ್ ನ್ಯೂಸ್
05-09-25 08:36 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಎಟಿಎಂ ಹೊಕ್ಕ ಕಳ್ಳನೊಬ್ಬ ಅದರ ಕ್ಯಾಶ್ ಬಾಕ್ಸ್ ಒಡೆದು ಹಣ ದೋಚಲು ಯತ್ನಿಸುತ್ತಿದ್ದಾಗಲೇ ದೆಹಲಿಯಿಂದ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಅಲರ್ಟ್ ಆಗಿ ಆರೋಪಿಯನ್ನು ಬಂಧಿಸಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಕೋಟೆಕಾರು ಬೀರಿಯ ಎಸ್ ಬಿಐ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಘಟನೆ ನಡೆದಿದ್ದು ಆರೋಪಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾಗಪ್ಪ ಕೆರಳಟ್ಟಿ (41) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ನಸುಕಿನ 2.30ರ ವೇಳೆಗೆ ಆರೋಪಿ ಎಟಿಎಂ ಒಳಹೊಕ್ಕಿದ್ದು ಕ್ಯಾಶ್ ಬಾಕ್ಸ್ ಓಪನ್ ಮಾಡಲು ಯತ್ನಿಸಿದ್ದಾನೆ. ಕೈಯಲ್ಲಿದ್ದ ಆಯುಧ ಬಳಸಿ ಬಾಕ್ಸ್ ಓಪನ್ ಮಾಡಲು ನೋಡುತ್ತಿದ್ದಾಗ ಅಲರ್ಟ್ ಮೆಸೇಜ್ ಹೋಗಿತ್ತು.
ದೇಶಾದ್ಯಂತ ಎಟಿಎಂ ಕೇಂದ್ರಗಳ ಬಗ್ಗೆ ನಿಗಾ ಇಡುವ ದೆಹಲಿ ಕೇಂದ್ರಕ್ಕೆ ಮೆಸೇಜ್ ಬಂದಿದ್ದನ್ನು ಆಧರಿಸಿ ಅಲ್ಲಿನ ಸಿಬಂದಿ ರಂಜಿತ್, ಕೋಟೆಕಾರಿನ ಎಟಿಎಂ ನೋಡಿಕೊಳ್ಳುವ ದೀಪಕ್ ಅಮೀನ್ ಅವರಿಗೆ ಮಾಹಿತಿ ನೀಡಿದ್ದರು. ಇದರಂತೆ, ದೀಪಕ್ ಕೂಡಲೇ 112 ಸಂಖ್ಯೆಗೆ ದೂರು ರವಾನಿಸಿದ್ದರು. ದೂರು ಆಧರಿಸಿ ಉಳ್ಳಾಲ ಪೊಲೀಸರು ಅಲರ್ಟ್ ಆಗಿದ್ದು ಸ್ಥಳಕ್ಕೆ ಧಾವಿಸಿ ಕೋಟೆಕಾರು ಎಟಿಎಂ ಒಳಗಡೆ ಕ್ಯಾಶ್ ಬಾಕ್ಸ್ ಒಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಎಟಿಎಂ ಕೇಂದ್ರದಿಂದ ಬಂದ ಮಾಹಿತಿ ಆಧರಿಸಿ ಸಿಬಂದಿ ಮತ್ತು ಪೊಲೀಸರು ಸಕಾಲಿಕವಾಗಿ ಎಚ್ಚತ್ತಿದ್ದರಿಂದ ಎಟಿಎಂನಿಂದ ಹಣ ಕಳವು ಮಾಡುವ ಪ್ರಯತ್ನ ವಿಫಲಗೊಂಡಿದೆ.
An attempted ATM robbery in Kotekar was foiled in the early hours of Thursday after a real-time alert from Delhi prompted Ullal Police to act swiftly and arrest the accused. The incident occurred at the SBI ATM center in Beeri, Kotekar, where the accused, Nagappa Keralatti (41), a native of Kushtagi taluk in Koppal district, was caught red-handed while trying to break open the cash box inside the ATM.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm