ಬ್ರೇಕಿಂಗ್ ನ್ಯೂಸ್
05-09-25 08:36 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಎಟಿಎಂ ಹೊಕ್ಕ ಕಳ್ಳನೊಬ್ಬ ಅದರ ಕ್ಯಾಶ್ ಬಾಕ್ಸ್ ಒಡೆದು ಹಣ ದೋಚಲು ಯತ್ನಿಸುತ್ತಿದ್ದಾಗಲೇ ದೆಹಲಿಯಿಂದ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಅಲರ್ಟ್ ಆಗಿ ಆರೋಪಿಯನ್ನು ಬಂಧಿಸಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಕೋಟೆಕಾರು ಬೀರಿಯ ಎಸ್ ಬಿಐ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಘಟನೆ ನಡೆದಿದ್ದು ಆರೋಪಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾಗಪ್ಪ ಕೆರಳಟ್ಟಿ (41) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ನಸುಕಿನ 2.30ರ ವೇಳೆಗೆ ಆರೋಪಿ ಎಟಿಎಂ ಒಳಹೊಕ್ಕಿದ್ದು ಕ್ಯಾಶ್ ಬಾಕ್ಸ್ ಓಪನ್ ಮಾಡಲು ಯತ್ನಿಸಿದ್ದಾನೆ. ಕೈಯಲ್ಲಿದ್ದ ಆಯುಧ ಬಳಸಿ ಬಾಕ್ಸ್ ಓಪನ್ ಮಾಡಲು ನೋಡುತ್ತಿದ್ದಾಗ ಅಲರ್ಟ್ ಮೆಸೇಜ್ ಹೋಗಿತ್ತು.
ದೇಶಾದ್ಯಂತ ಎಟಿಎಂ ಕೇಂದ್ರಗಳ ಬಗ್ಗೆ ನಿಗಾ ಇಡುವ ದೆಹಲಿ ಕೇಂದ್ರಕ್ಕೆ ಮೆಸೇಜ್ ಬಂದಿದ್ದನ್ನು ಆಧರಿಸಿ ಅಲ್ಲಿನ ಸಿಬಂದಿ ರಂಜಿತ್, ಕೋಟೆಕಾರಿನ ಎಟಿಎಂ ನೋಡಿಕೊಳ್ಳುವ ದೀಪಕ್ ಅಮೀನ್ ಅವರಿಗೆ ಮಾಹಿತಿ ನೀಡಿದ್ದರು. ಇದರಂತೆ, ದೀಪಕ್ ಕೂಡಲೇ 112 ಸಂಖ್ಯೆಗೆ ದೂರು ರವಾನಿಸಿದ್ದರು. ದೂರು ಆಧರಿಸಿ ಉಳ್ಳಾಲ ಪೊಲೀಸರು ಅಲರ್ಟ್ ಆಗಿದ್ದು ಸ್ಥಳಕ್ಕೆ ಧಾವಿಸಿ ಕೋಟೆಕಾರು ಎಟಿಎಂ ಒಳಗಡೆ ಕ್ಯಾಶ್ ಬಾಕ್ಸ್ ಒಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಎಟಿಎಂ ಕೇಂದ್ರದಿಂದ ಬಂದ ಮಾಹಿತಿ ಆಧರಿಸಿ ಸಿಬಂದಿ ಮತ್ತು ಪೊಲೀಸರು ಸಕಾಲಿಕವಾಗಿ ಎಚ್ಚತ್ತಿದ್ದರಿಂದ ಎಟಿಎಂನಿಂದ ಹಣ ಕಳವು ಮಾಡುವ ಪ್ರಯತ್ನ ವಿಫಲಗೊಂಡಿದೆ.
An attempted ATM robbery in Kotekar was foiled in the early hours of Thursday after a real-time alert from Delhi prompted Ullal Police to act swiftly and arrest the accused. The incident occurred at the SBI ATM center in Beeri, Kotekar, where the accused, Nagappa Keralatti (41), a native of Kushtagi taluk in Koppal district, was caught red-handed while trying to break open the cash box inside the ATM.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm