ಬ್ರೇಕಿಂಗ್ ನ್ಯೂಸ್
05-09-25 10:53 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪೆರ್ನೆಯಲ್ಲಿ ಹಟ್ಟಿಯಿಂದ ಹಸುವನ್ನು ಕದ್ದು ಅಲ್ಲಿಯೇ ತೋಟದಲ್ಲಿ ಕಡಿದು ಮಾಂಸಗೈದ ಪ್ರಕರಣದಲ್ಲಿ ಮಂಗಳೂರಿನ ಕುದ್ರೋಳಿಯ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಕುದ್ರೋಳಿ ನಿವಾಸಿ, ಬೀಫ್ ಸ್ಟಾಲ್ ಮಾಲಕ ಮಹಮ್ಮದ್ ಮನ್ಸೂರ್ (48), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತರು.
ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಗುರುವಾರ ನಸುಕಿನಲ್ಲಿ ದೇಜಪ್ಪ ಮೂಲ್ಯ ಎಂಬವರ ಮನೆ ಹಟ್ಟಿಯಲ್ಲಿದ್ದ ಗಬ್ಬದ ಹಸುವನ್ನು ಕದ್ದೊಯ್ದು ಅವರದೇ ತೋಟದಲ್ಲಿ ಕಡಿದು ಮಾಂಸ ಮಾಡಿ ಒಯ್ಯಲಾಗಿತ್ತು. ದುಷ್ಕರ್ಮಿಗಳ ಕೃತ್ಯದ ಭಾರೀ ಆಕ್ರೋಶ ಕೇಳಿಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹ ಮಾಡಿದ್ದರು. ಪುತ್ತೂರು ಶಾಸಕ ಅಶೋಕ್ ರೈ ಕೂಡ ಆಕ್ರೋಶ ವ್ಯಕ್ತಪಡಿಸಿ, ಹಸುವನ್ನು ಕದ್ದು ಹತ್ಯೆಗೈದ ಆರೋಪಿಗಳ ಕೈ ಕಡಿಯಬೇಕೆಂದು ಹೇಳಿದ್ದರು.
ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಆರೋಪಿಗಳು ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವುಗೈದು, ಅಲ್ಲಿಯೇ ಪರಿಸರದಲ್ಲಿ ಹತ್ಯೆಗೈದು ಮಾಂಸ ಮಾಡಿದ್ದು ಪತ್ತೆಯಾಗಿತ್ತು. ಮರುದಿನ ಅದರ ಅವಶೇಷಗಳು ಅಲ್ಲಿಯೇ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ತುಂಬೆಯ ಘಟನೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸದೆ ನಿರ್ಲಕ್ಷ್ಯ ತೋರಿದ್ದೇ ಉಪ್ಪಿನಂಗಡಿ ಬಳಿ ದನವನ್ನು ಹಟ್ಟಿಯಿಂದ ಎಳೆದೊಯ್ದು ಹತ್ಯೆಗೈಯಲು ಕಾರಣವಾಗಿತ್ತು. ಇದೀಗ ಎರಡೂ ಪ್ರಕರಣ ಒಂದೇ ರೀತಿ ಇರೋದನ್ನು ಅರಿತು ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
In a shocking incident, a cow was stolen from a cowshed and slaughtered in a nearby plantation in Perenne village under Uppinangady Police limits. The incident has sparked outrage, leading to the arrest of three individuals, including the owner of a beef stall in Kudroli, Mangaluru. The arrested have been identified as: Mohammed Mansoor (48), a resident of Kudroli and owner of a beef stall. Irshad (34), resident of Chembugudde, Ullal. Abdul Azeem (18),
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm