ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm