ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm