ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm