ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am