ಬ್ರೇಕಿಂಗ್ ನ್ಯೂಸ್
12-09-25 10:48 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಪಜೀರು ಮತ್ತು ತೊಕ್ಕೊಟ್ಟುವಿನಲ್ಲಿ ಚಿನ್ನ ಕದ್ದಿದ್ದ ಕಳ್ಳಿಯೋರ್ವಳನ್ನು ಉಳ್ಳಾಲ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆಕೆಯಿಂದ 1.80 ಲಕ್ಷ ರೂಪಾಯಿ ಮೌಲ್ಯದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯೆ ಬಂಧಿತ ಕಳ್ಳಿ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬ ಮಹಿಳೆ ಕಳೆದ ಜೂನ್ 2ರಂದು ತನ್ನ ಮಕ್ಕಳೊಂದಿಗೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಗೆ ಬಟ್ಟೆ ಖರೀದಿಸಲು ಬಂದಿದ್ದ ವೇಳೆ ಮಳೆ ಬಂದ ಕಾರಣ ಸ್ಥಳೀಯ ಬೇಕರಿಯ ಮುಂದೆ ಆಶ್ರಯ ಪಡೆದಿದ್ದರು. ಈ ವೇಳೆ ರಹಮತ್ ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಯಾರೋ ಬುರ್ಖಾ ಧರಿಸಿದ್ದ ಹೆಂಗಸು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ರಹಮತ್ ದೂರು ದಾಖಲಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡವು ಖಚಿತ ಮಾಹಿತಿಯನ್ವಯ ಇಂದು ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ರಹಮತ್ ಅವರ ಮಗಳ ಕುತ್ತಿಗೆಯ ಹತ್ತು ಗ್ರಾಂ ಚಿನ್ನದ ಸರ ಕದ್ದಿದ್ದಲ್ಲದೆ, ಕಳೆದ ಜುಲೈ 9 ರಂದು ಪಜೀರು ಗ್ರಾಮದ ಖಾಸಗಿ ಸಭಾಂಗಣದಲ್ಲಿ ನಡೆದಿದ್ದ ಮದುವೆ ಸಮಾರಂಭದಲ್ಲೂ ಕೈಚಳಕ ತೋರಿ ಬ್ಯಾಗ್ ನಿಂದ 8 ಗ್ರಾಂ.ನ ಚಿನ್ನದ ಸರ ಕದ್ದಿರೋದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾಳೆ. ಪಜೀರುವಿನಲ್ಲಿ ಸರ ಕಳ್ಳತನವಾದ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಮಿನ್ನತ್ ಕಳವು ಮಾಡಿದ್ದ 10 ಗ್ರಾಂ ಮತ್ತು 8 ಗ್ರಾಂ ತೂಕದ ಒಟ್ಟು 1,80,000 ಮೌಲ್ಯದ ಎರಡು ಚಿನ್ನದ ಸರವನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Ullal police have arrested a woman involved in two separate gold chain thefts reported in Thokottu and Pajiru during June and July. The accused, identified as Minnath, a resident of Akkarakeri in Ullal, has been taken into custody, and police have recovered 18 grams of gold worth ₹1.8 lakh from her possession.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:19 pm
HK News Staffer
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm