ಬ್ರೇಕಿಂಗ್ ನ್ಯೂಸ್
12-09-25 10:48 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಪಜೀರು ಮತ್ತು ತೊಕ್ಕೊಟ್ಟುವಿನಲ್ಲಿ ಚಿನ್ನ ಕದ್ದಿದ್ದ ಕಳ್ಳಿಯೋರ್ವಳನ್ನು ಉಳ್ಳಾಲ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆಕೆಯಿಂದ 1.80 ಲಕ್ಷ ರೂಪಾಯಿ ಮೌಲ್ಯದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯೆ ಬಂಧಿತ ಕಳ್ಳಿ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬ ಮಹಿಳೆ ಕಳೆದ ಜೂನ್ 2ರಂದು ತನ್ನ ಮಕ್ಕಳೊಂದಿಗೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಗೆ ಬಟ್ಟೆ ಖರೀದಿಸಲು ಬಂದಿದ್ದ ವೇಳೆ ಮಳೆ ಬಂದ ಕಾರಣ ಸ್ಥಳೀಯ ಬೇಕರಿಯ ಮುಂದೆ ಆಶ್ರಯ ಪಡೆದಿದ್ದರು. ಈ ವೇಳೆ ರಹಮತ್ ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಯಾರೋ ಬುರ್ಖಾ ಧರಿಸಿದ್ದ ಹೆಂಗಸು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ರಹಮತ್ ದೂರು ದಾಖಲಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡವು ಖಚಿತ ಮಾಹಿತಿಯನ್ವಯ ಇಂದು ಉಳ್ಳಾಲ ಅಕ್ಕರೆಕೆರೆ ನಿವಾಸಿ ಮಿನ್ನತ್ ಎಂಬಾಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ರಹಮತ್ ಅವರ ಮಗಳ ಕುತ್ತಿಗೆಯ ಹತ್ತು ಗ್ರಾಂ ಚಿನ್ನದ ಸರ ಕದ್ದಿದ್ದಲ್ಲದೆ, ಕಳೆದ ಜುಲೈ 9 ರಂದು ಪಜೀರು ಗ್ರಾಮದ ಖಾಸಗಿ ಸಭಾಂಗಣದಲ್ಲಿ ನಡೆದಿದ್ದ ಮದುವೆ ಸಮಾರಂಭದಲ್ಲೂ ಕೈಚಳಕ ತೋರಿ ಬ್ಯಾಗ್ ನಿಂದ 8 ಗ್ರಾಂ.ನ ಚಿನ್ನದ ಸರ ಕದ್ದಿರೋದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾಳೆ. ಪಜೀರುವಿನಲ್ಲಿ ಸರ ಕಳ್ಳತನವಾದ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಮಿನ್ನತ್ ಕಳವು ಮಾಡಿದ್ದ 10 ಗ್ರಾಂ ಮತ್ತು 8 ಗ್ರಾಂ ತೂಕದ ಒಟ್ಟು 1,80,000 ಮೌಲ್ಯದ ಎರಡು ಚಿನ್ನದ ಸರವನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Ullal police have arrested a woman involved in two separate gold chain thefts reported in Thokottu and Pajiru during June and July. The accused, identified as Minnath, a resident of Akkarakeri in Ullal, has been taken into custody, and police have recovered 18 grams of gold worth ₹1.8 lakh from her possession.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm