ಬ್ರೇಕಿಂಗ್ ನ್ಯೂಸ್
16-09-25 07:12 pm HK News Desk ಕ್ರೈಂ
ಬೀದರ್, ಸೆ 16 : ಮಗುವನ್ನು ಆಟ ಆಡಿಸುವ ನೆಪದಲ್ಲಿ ಮಲತಾಯಿಯೊಬ್ಬಳು ಮೂರನೇ ಮಹಡಿಗೆ ಕರೆದೊಯ್ದು ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯದಿಂದ ಕ್ರೂರ ಕೃತ್ಯ ಬಯಲಾಗಿದ್ದು, ಈಗ ಮಲತಾಯಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾಳೆ.
ಏಳು ವರ್ಷದ ಸಾನ್ವಿ ಮೃತ ಬಾಲಕಿ. ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ.
ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಆ ದಿನ ಎಲ್ಲರೂ ಸಾನ್ವಿ ಆಯತಪ್ಪಿ ಬಿದ್ದಿದ್ದಾಳೆ ಎಂದು ನಂಬಿದ್ದರು. ಮರುದಿನ ಮೃತ ಬಾಲಕಿ ತಂದೆ ಸಿದ್ಧಾಂತ ಅವರ ದೂರಿನ ಮೇರೆಗೆ ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ, ಕೆಲ ದಿನಗಳ ಬಳಿಕ ಮೃತ ಬಾಲಕಿ ತಂದೆಗೆ ಪಕ್ಕದ ಮನೆಯವರು ಸಿಸಿ ಟಿವಿಯ ವಿಡಿಯೋವೊಂದನ್ನು ಕಳುಹಿಸಿದ್ದು, ನೋಡಿ ಬೆಚ್ಚಿಬಿದ್ದಾರೆ. ವಿಡಿಯೋದಲ್ಲಿ ಬಾಲಕಿ ಸಾವನ್ನಪ್ಪಿದ ದಿನ ಆಕೆಯ ಜೊತೆ ಮಲತಾಯಿ ರಾಧಾ ಸಹ ಅನುಮಾನಾಸ್ಪದವಾಗಿ ಓಡಾಡಿರುವುದು ಕಂಡುಬಂದಿದೆ. ವಿಡಿಯೋ ಆಧರಿಸಿ ಬಾಲಕಿಯ ಅಜ್ಜಿಯು ಸೊಸೆ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಧಾಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸಾನ್ವಿ ತಾಯಿ ಆರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತಪಟ್ಟಿದ್ದರು. 2023ರಲ್ಲಿ ರಾಧಾ ಜೊತೆ ಸಿದ್ಧಾಂತ ಎರಡನೇ ವಿವಾಹವಾಗಿದ್ದು, ಅವರಿಗೆ ಇಬ್ಬರು ಅವಳಿ ಮಕ್ಕಳಿದ್ದಾರೆ. ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಈ ಹೇಯ ಕೃತ್ಯ ಎಸಗಿದ್ದಾಗಿ ರಾಧಾ ವಿಚಾರಣೆ ವೇಳೆ ತಪ್ರೊಪ್ಪಿಕೊಂಡಿದ್ದಾಳೆ.
In a chilling incident that has shocked the city of Bidar, a stepmother allegedly killed her 7-year-old stepdaughter by pushing her off the third floor of a building under the pretext of playing with her. The gruesome act took place in Adarsh Colony and came to light only after CCTV footage exposed the truth. The accused has been taken into judicial custody.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm