ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm