ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm