ಬ್ರೇಕಿಂಗ್ ನ್ಯೂಸ್
21-09-25 02:30 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ಐಎಎಸ್ ಅಧಿಕಾರಿ ಮಣಿವಣ್ಣನ್ಅವರಿಗೂ ಸೈಬರ್ ವಂಚಕರ ಕಾಟ ಎದುರಾಗಿದೆ. ಮಣಿವಣ್ಣನ್ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಆಪ್ತರನ್ನೇ ವಂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ. ಮಣಿವಣ್ಣನ್ಗೆ ನಕಲಿ ಫೇಸ್ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್ ಅವರ ಹೆಸರು, ಫೂಟೋ ಬಳಸಲಾಗಿದೆ.
ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮೆಸೇಜ್ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ಮೆಸೇಜ್ ಬರುತ್ತದೆ. ಹಿರಿಯ ಐಎಎಸ್ ಅಧಿಕಾರಿಯ ಮೆಸೇಜ್ ಎಂದು ನಂಬಿದ ಇಬ್ಬರು ಗೆಳೆಯರು ಮೋಸಕ್ಕೆ ಒಳಗಾಗಿದ್ದಾರೆ. ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಮಣಿವಣ್ಣನ್ ಎರಡನೇ ಬಾರಿ ಸೈಬರ್ ವಂಚಕರ ದಾಳಿಗೆ ಸಿಲುಕಿದ್ದಾರೆ. 2ನೇ ಪ್ರಕರಣ ಇದಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆ ನಡೆದಿತ್ತು. ಆಗಲೂ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿದ್ದಾರೆ.
Senior IAS officer and Social Welfare Department Principal Secretary P. Manivannan has once again fallen prey to cyber fraudsters, who created fake Facebook accounts in his name and duped his close friends by sending fraudulent messages.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm