ಬ್ರೇಕಿಂಗ್ ನ್ಯೂಸ್
21-09-25 02:30 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ಐಎಎಸ್ ಅಧಿಕಾರಿ ಮಣಿವಣ್ಣನ್ಅವರಿಗೂ ಸೈಬರ್ ವಂಚಕರ ಕಾಟ ಎದುರಾಗಿದೆ. ಮಣಿವಣ್ಣನ್ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಆಪ್ತರನ್ನೇ ವಂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ. ಮಣಿವಣ್ಣನ್ಗೆ ನಕಲಿ ಫೇಸ್ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್ ಅವರ ಹೆಸರು, ಫೂಟೋ ಬಳಸಲಾಗಿದೆ.
ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮೆಸೇಜ್ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ಮೆಸೇಜ್ ಬರುತ್ತದೆ. ಹಿರಿಯ ಐಎಎಸ್ ಅಧಿಕಾರಿಯ ಮೆಸೇಜ್ ಎಂದು ನಂಬಿದ ಇಬ್ಬರು ಗೆಳೆಯರು ಮೋಸಕ್ಕೆ ಒಳಗಾಗಿದ್ದಾರೆ. ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಮಣಿವಣ್ಣನ್ ಎರಡನೇ ಬಾರಿ ಸೈಬರ್ ವಂಚಕರ ದಾಳಿಗೆ ಸಿಲುಕಿದ್ದಾರೆ. 2ನೇ ಪ್ರಕರಣ ಇದಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆ ನಡೆದಿತ್ತು. ಆಗಲೂ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿದ್ದಾರೆ.
Senior IAS officer and Social Welfare Department Principal Secretary P. Manivannan has once again fallen prey to cyber fraudsters, who created fake Facebook accounts in his name and duped his close friends by sending fraudulent messages.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm