ಬ್ರೇಕಿಂಗ್ ನ್ಯೂಸ್
21-09-25 02:30 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ಐಎಎಸ್ ಅಧಿಕಾರಿ ಮಣಿವಣ್ಣನ್ಅವರಿಗೂ ಸೈಬರ್ ವಂಚಕರ ಕಾಟ ಎದುರಾಗಿದೆ. ಮಣಿವಣ್ಣನ್ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಆಪ್ತರನ್ನೇ ವಂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ. ಮಣಿವಣ್ಣನ್ಗೆ ನಕಲಿ ಫೇಸ್ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್ ಅವರ ಹೆಸರು, ಫೂಟೋ ಬಳಸಲಾಗಿದೆ.
ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮೆಸೇಜ್ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ಮೆಸೇಜ್ ಬರುತ್ತದೆ. ಹಿರಿಯ ಐಎಎಸ್ ಅಧಿಕಾರಿಯ ಮೆಸೇಜ್ ಎಂದು ನಂಬಿದ ಇಬ್ಬರು ಗೆಳೆಯರು ಮೋಸಕ್ಕೆ ಒಳಗಾಗಿದ್ದಾರೆ. ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಮಣಿವಣ್ಣನ್ ಎರಡನೇ ಬಾರಿ ಸೈಬರ್ ವಂಚಕರ ದಾಳಿಗೆ ಸಿಲುಕಿದ್ದಾರೆ. 2ನೇ ಪ್ರಕರಣ ಇದಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆ ನಡೆದಿತ್ತು. ಆಗಲೂ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿದ್ದಾರೆ.
Senior IAS officer and Social Welfare Department Principal Secretary P. Manivannan has once again fallen prey to cyber fraudsters, who created fake Facebook accounts in his name and duped his close friends by sending fraudulent messages.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm