ಬ್ರೇಕಿಂಗ್ ನ್ಯೂಸ್
23-09-25 11:01 am HK News Desk ಕ್ರೈಂ
ನವದೆಹಲಿ, ಸೆ.23 : ತಮ್ಮನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಸೈಬರ್ ವಂಚಕರು ದಕ್ಷಿಣ ದೆಹಲಿಯ ಗುಲ್ಮೋಹರ್ ಪಾರ್ಕ್ ಪ್ರದೇಶದಲ್ಲಿ ನಿವೃತ್ತ ಬ್ಯಾಂಕರ್ ಒಬ್ಬರನ್ನು ಒಂದು ತಿಂಗಳ ಕಾಲ "ಡಿಜಿಟಲ್ ಅರೆಸ್ಟ್" ಬಂಧನದಲ್ಲಿರಿಸಿದ್ದಾಗಿ ಯಾಮಾರಿಸಿ ಅವರಿಂದಲೇ 23 ಕೋಟಿ ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ.
ಆರೋಪಿಗಳು ನಿಮ್ಮ ಆಧಾರ್ ಕಾರ್ಡ್ ನಂಬರ್, ಮಾದಕ ದ್ರವ್ಯ ಸಾಗಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದು, ತನಿಖೆಯ ನೆಪದಲ್ಲಿ ಫ್ಲಾಟ್ ಒಳಗೆ ಇರಬೇಕೆಂದು ಹೇಳಿ ಯಾಮಾರಿಸಿದ್ದಾರೆ. ಆತನನ್ನು ಮನೆಯಿಂದ ಹೊರಗೆ ಹೋಗದಂತೆ ಸೂಚಿಸಿದ್ದಲ್ಲದೆ, ಯಾರೊಂದಿಗೂ ಮಾತನಾಡುವಂತಿಲ್ಲ. ಇಲ್ಲದಿದ್ದರೆ ನೇರವಾಗಿ ಬಂದು ಅರೆಸ್ಟ್ ಮಾಡ್ತೀವಿ ಎಂದು ಬೆದರಿಸಿ, ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.
78 ವರ್ಷದ ನಿವೃತ್ತ ಬ್ಯಾಂಕರ್ ಮೋಸ ಹೋಗಿದ್ದು, ಆಗಸ್ಟ್ 4 ರಂದು ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಳ್ಳುವ ವ್ಯಕ್ತಿ ಕರೆ ಮಾಡಿದ್ದರು. ಇಡಿ ಮತ್ತು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡು ಸಂಪರ್ಕಿಸಿದ್ದು, ವಿಷಯ ಯಾರಿಗೂ ಹೇಳದಂತೆ ಬೆದರಿಸಿದ್ದರು ಎಂದು ದೂರು ನೀಡಿದ್ದಾರೆ. ವಂಚನೆ ಜಾಲದ ಈ ಕೃತ್ಯ ಸೆಪ್ಟೆಂಬರ್ 4 ರ ವರೆಗೆ ಮುಂದುವರೆದಿತ್ತು. ಆನಂತರ ಫೋನ್ ಬರುವುದು ಕಡಿಮೆಯಾದ ಸಂದರ್ಭದಲ್ಲಿ ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೆಪ್ಟೆಂಬರ್ 19 ರಂದು NCRP ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದಾರೆ.
ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಮೊತ್ತದಲ್ಲಿ 12.11 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಿದ್ದಾರೆ. ತನಿಖೆ ವೇಳೆ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿ, ದೇಶದ ವಿವಿಧ ಭಾಗಗಳಲ್ಲಿ ಡ್ರಾ ಮಾಡಿರುವುದು ಪತ್ತೆಯಾಗಿದೆ.
A 78-year-old former banker from South Delhi received a phone call last month. The caller, who claimed that the banker’s mobile number had been used for “fraudulent” and “illegal” activities, introduced herself as a senior official of a telecom company and later claimed that Mumbai police officers were involved in the “probe” into the incident.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm