ಬ್ರೇಕಿಂಗ್ ನ್ಯೂಸ್
23-09-25 11:01 am HK News Desk ಕ್ರೈಂ
ನವದೆಹಲಿ, ಸೆ.23 : ತಮ್ಮನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಸೈಬರ್ ವಂಚಕರು ದಕ್ಷಿಣ ದೆಹಲಿಯ ಗುಲ್ಮೋಹರ್ ಪಾರ್ಕ್ ಪ್ರದೇಶದಲ್ಲಿ ನಿವೃತ್ತ ಬ್ಯಾಂಕರ್ ಒಬ್ಬರನ್ನು ಒಂದು ತಿಂಗಳ ಕಾಲ "ಡಿಜಿಟಲ್ ಅರೆಸ್ಟ್" ಬಂಧನದಲ್ಲಿರಿಸಿದ್ದಾಗಿ ಯಾಮಾರಿಸಿ ಅವರಿಂದಲೇ 23 ಕೋಟಿ ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ.
ಆರೋಪಿಗಳು ನಿಮ್ಮ ಆಧಾರ್ ಕಾರ್ಡ್ ನಂಬರ್, ಮಾದಕ ದ್ರವ್ಯ ಸಾಗಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದು, ತನಿಖೆಯ ನೆಪದಲ್ಲಿ ಫ್ಲಾಟ್ ಒಳಗೆ ಇರಬೇಕೆಂದು ಹೇಳಿ ಯಾಮಾರಿಸಿದ್ದಾರೆ. ಆತನನ್ನು ಮನೆಯಿಂದ ಹೊರಗೆ ಹೋಗದಂತೆ ಸೂಚಿಸಿದ್ದಲ್ಲದೆ, ಯಾರೊಂದಿಗೂ ಮಾತನಾಡುವಂತಿಲ್ಲ. ಇಲ್ಲದಿದ್ದರೆ ನೇರವಾಗಿ ಬಂದು ಅರೆಸ್ಟ್ ಮಾಡ್ತೀವಿ ಎಂದು ಬೆದರಿಸಿ, ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.
78 ವರ್ಷದ ನಿವೃತ್ತ ಬ್ಯಾಂಕರ್ ಮೋಸ ಹೋಗಿದ್ದು, ಆಗಸ್ಟ್ 4 ರಂದು ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಳ್ಳುವ ವ್ಯಕ್ತಿ ಕರೆ ಮಾಡಿದ್ದರು. ಇಡಿ ಮತ್ತು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡು ಸಂಪರ್ಕಿಸಿದ್ದು, ವಿಷಯ ಯಾರಿಗೂ ಹೇಳದಂತೆ ಬೆದರಿಸಿದ್ದರು ಎಂದು ದೂರು ನೀಡಿದ್ದಾರೆ. ವಂಚನೆ ಜಾಲದ ಈ ಕೃತ್ಯ ಸೆಪ್ಟೆಂಬರ್ 4 ರ ವರೆಗೆ ಮುಂದುವರೆದಿತ್ತು. ಆನಂತರ ಫೋನ್ ಬರುವುದು ಕಡಿಮೆಯಾದ ಸಂದರ್ಭದಲ್ಲಿ ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೆಪ್ಟೆಂಬರ್ 19 ರಂದು NCRP ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದಾರೆ.
ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಮೊತ್ತದಲ್ಲಿ 12.11 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಿದ್ದಾರೆ. ತನಿಖೆ ವೇಳೆ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿ, ದೇಶದ ವಿವಿಧ ಭಾಗಗಳಲ್ಲಿ ಡ್ರಾ ಮಾಡಿರುವುದು ಪತ್ತೆಯಾಗಿದೆ.
A 78-year-old former banker from South Delhi received a phone call last month. The caller, who claimed that the banker’s mobile number had been used for “fraudulent” and “illegal” activities, introduced herself as a senior official of a telecom company and later claimed that Mumbai police officers were involved in the “probe” into the incident.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm