ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm