ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm