ಬ್ರೇಕಿಂಗ್ ನ್ಯೂಸ್
27-09-25 02:16 pm Udupi Correspondent ಕ್ರೈಂ
ಉಡುಪಿ, ಸೆ.27 : ಖಾಸಗಿ ಬಸ್ ಮಾಲೀಕ ಮತ್ತು ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಸೈಫುದ್ದೀನ್ ಎಂಬವರನ್ನು ಮಲ್ಪೆ ಬಳಿಯ ಕೊಡವೂರಿನ ಮನೆಯಲ್ಲಿ ಆಗಂತುಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಮಧ್ಯಾಹ್ನ ವೇಳೆಗೆ ಸೈಫುದ್ದೀನ್ ಮನೆಗೆ ಬಂದಿದ್ದಾಗಲೇ ಕಾರಿನಲ್ಲಿ ಬಂದಿದ್ದ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಮೂವರು ಕೃತ್ಯದಲ್ಲಿ ಭಾಗಿಯಾದ ಮಾಹಿತಿ ಇದೆ, ಯಾಕಾಗಿ, ಯಾರು ಕೃತ್ಯ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಬಳಿಕ ತಿಳಿಯಲಿದೆ, ನಾವು ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ ಎಂದಿದ್ದಾರೆ.


ಘಟನೆ ಬೆನ್ನಲ್ಲೇ ಮಲ್ಪೆ ಪೊಲೀಸರು ಮತ್ತು ಉಡುಪಿ ಪೊಲೀಸರು ನಾಕಾಬಂದಿ ಮಾಡಿ ತಪಾಸಣೆ ಚುರುಕುಗೊಳಿಸಿದ್ದಾರೆ. ಸೈಫುದ್ದೀನ್ ಉಡುಪಿ ನಗರ ಭಾಗದಲ್ಲಿ ಸಂಚರಿಸುತ್ತಿದ್ದ ಎಕೆಎಂಎಸ್ ಹೆಸರಿನ ಬಸ್ಸನ್ನು ನಡೆಸುತ್ತಿದ್ದರು. ಮಲ್ಪೆ ಠಾಣೆಯಲ್ಲಿ ರೌಡಿಶೀಟರ್ ಎನ್ನಲಾಗುತ್ತಿದ್ದು ಹಳೆ ದ್ವೇಷದಿಂದಲೇ ಕೃತ್ಯ ಎಸಗಿರುವ ಅನುಮಾನ ಇದೆ. ಆತ್ರಾಡಿ ನಿವಾಸಿಯಾಗಿರುವ ಸೈಫುದ್ದೀನ್ ಇತ್ತೀಚೆಗಷ್ಟೇ ಮಲ್ಪೆಯಲ್ಲಿ ಹೊಸ ಮನೆ ಖರೀದಿಸಿದ್ದರು. ಅಲ್ಲಿ ಒಬ್ಬರೇ ಇದ್ದಾಗಲೇ ಆಗಂತುಕರು ಕೃತ್ಯ ಎಸಗಿದ್ದಾರೆ.
A shocking daylight murder took place in Malpe near Kodavoor, where private bus owner and known rowdy-sheeter Saifuddin was brutally hacked to death inside his newly purchased house. A gang of three arrived in a car and attacked him with lethal weapons when he returned home in the afternoon. Udupi SP Hariram Shankar visited the spot and confirmed that three assailants are suspected, with teams formed to trace the culprits. Police have intensified checks and nakabandis across Udupi. Saifuddin, who operated the AKMS bus in Udupi city, was reportedly killed due to old rivalry.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm