ಬ್ರೇಕಿಂಗ್ ನ್ಯೂಸ್
28-09-25 04:57 pm Udupi Correspondent ಕ್ರೈಂ
ಉಡುಪಿ, ಸೆ.28 : ಎಕೆಎಂಎಸ್ ಬಸ್ ಮಾಲಕ, ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು. ಶನಿವಾರ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನ ಸಾಲ್ಮರದಲ್ಲಿ ಸೈಫುದ್ದೀನ್ ಅವರನ್ನು ಹತ್ಯೆ ಮಾಡಲಾಗಿತ್ತು. ಸೈಫುದ್ದೀನ್ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಅವರ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದರೆಂದು ತಿಳಿದುಬಂದಿತ್ತು.


ಮನೆಯ ಹೊರಗೆ ಅಂಗಳದಲ್ಲಿ ಮಚ್ಚಿನಿಂದ ಯದ್ವಾತದ್ವಾ ಕಡಿದು ಹಾಕಿದ್ದು ಸ್ಥಳದಲ್ಲಿಯೇ ಜೀವ ಹೋಗಿತ್ತು. ಸಂಪೂರ್ಣ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದರು. ಉಡುಪಿ ಮತ್ತು ಹಿರಿಯಡ್ಕ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಸೈಫ್ ಮೇಲೆ ಕೊಲೆ, ಕೊಲೆಯತ್ನ ಸೇರಿ 18 ಕೇಸುಗಳಿದ್ದವು. ಖಾಸಗಿ ಬಸ್ಸನ್ನು ಪಾಲುದಾರಿಕೆಯಲ್ಲಿ ನಡೆಸುತ್ತಿದ್ದ ಎನ್ನಲಾಗುತ್ತಿದ್ದು ಮಣಿಪಾಲದಲ್ಲಿ ಕುಟುಂಬದ ಜತೆ ವಾಸವಾಗಿದ್ದ. ಈತನಿಗೆ ಕುಕ್ಕಿಕಟ್ಟೆಯ ನಿವಾಸಿ ಫೈಜಲ್ ಖಾನ್ ಮತ್ತು ದೊಡ್ಡಣಗುಡ್ಡೆ ನಿವಾಸಿ ಶರೀಫ್ ಹತ್ತಿರದ ಸ್ನೇಹಿತರಾಗಿದ್ದರು. ಸೈಫ್ನ ಮನೆಗೆ ಶನಿವಾರ ಬೆಳಗ್ಗೆ ಆಗಮಿಸಿದ್ದ ಫೈಜಲ್ ಖಾನ್, ಬಸ್ನ ವ್ಯವಹಾರದ ಕುರಿತು ಮಾತನಾಡಲು ಮಂಗಳೂರಿಗೆ ಹೋಗೋಣ ಎಂದು ಹೇಳಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಇರುವ ಮನೆಯ ಬಳಿಯಿಂದ ಅವನ ಕಾರಿನಲ್ಲಿ ತೆರಳಿದ್ದರು. ಆದರೆ ಇದರ ನಡುವೆಯೇ ಕಾರು ಮಲ್ಪೆ ಕಡೆಗೆ ತಿರುಗಿದ್ದು ಸಾಲ್ಮರದಲ್ಲಿ ಹೊಸ ಮನೆಯ ಎದುರಲ್ಲಿ ನಿಂತಿತ್ತು.
ಸ್ನೇಹಿತರಾದ ಫೈಜಲ್ ಖಾನ್ ಮತ್ತು ಶರೀಫ್ ಇತರರೊಂದಿಗೆ ಸೇರಿಕೊಂಡು ಸೈಫ್ ಮೇಲೆ ಹಲ್ಲೆಗೈದು ಕೊಂದು ಮುಗಿಸಿದ್ದಾರೆ. ಇವರ ನಡುವೆ ಹಣಕಾಸು ದ್ವೇಷ ಇತ್ತೇ, ಅದೇ ಕಾರಣಕ್ಕೆ ಕೃತ್ಯ ಆಗಿದೆಯೇ ಅಥವಾ ಹಳೆಯ ಕೇಸಿಗೆ ಪ್ರತೀಕಾರಕ್ಕಾಗಿ ಕೊಂದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲ್ಲುವ ಉದ್ದೇಶದಿಂದ ಸ್ನೇಹಿತರೇ ಮಲ್ಪೆಗೆ ಕರೆದುಕೊಂಡು ಹೋಗಿ ಕೊಲೆಗೈದು ಪರಾರಿಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೈಫುದ್ದೀನ್ ಅವರ ಮಗ ದೂರು ನೀಡಿದ್ದಾರೆ.
Udupi police have arrested three men within 24 hours in connection with the murder of Saifuddin, a bus operator and rowdy-sheeter facing 18 criminal cases.Saifuddin was hacked to death with machetes on Saturday at his newly purchased house in Kodavoor, allegedly by close friends Muhammad Faisal Khan (27), Muhammad Sharif (37), and Abdul Shukoor alias Addu (43).
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm