ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am