ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm