ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am