ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm