ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am