ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am