ಬ್ರೇಕಿಂಗ್ ನ್ಯೂಸ್
08-10-25 12:23 pm Mangalore Correspondent ಕ್ರೈಂ
ಮಂಗಳೂರು, ಅ.8 : ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮೂಡುಬಿದ್ರೆ ಪೊಲೀಸರು ದಾಳಿ ನಡೆಸಿ ಮೂರು ದನಗಳನ್ನು ರಕ್ಷಿಸಿದ್ದಾರೆ.
ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ದನ ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದಾಚೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಮಾಂಸವನ್ನು ಪಡೆಯಲು ಬಂದಿದ್ದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಪಿಎಸ್ಐ ಕೃಷ್ಣಪ್ಪ, ಅಖೀಲ್ ಅಹ್ಮದ್ ಹಾಗೂ ನಾಗರಾಜ್ ಕಾರ್ಯಾಚರಣೆ ನಡೆಸಿದ್ದರು.
ಕಾಟಿಪಳ್ಳದ ಮನೆಯಲ್ಲೇ ಗೋಹತ್ಯೆ
ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟು ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನ ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬಂದಿ ದಾಳಿ ಮಾಡಿ ಮೂವರು ಆರೋಪಿಗಳಾದ ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41) ಎ.ಕೆ. ಆಶೀಕ್, (22) ಅವರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ತಲೆಮರೆಸಿಕೊಂಡಿದ್ದಾನೆ. ಇಮ್ಮಿಯಾಜ್ ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಆಶೀಕ್ ಜತೆ ಸೇರಿಕೊಂಡು ವಧೆ ಮಾಡಿ ಸುಮಾರು 233.89 ಕೆಜಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು.
ಇಮ್ಮಿಯಾಜ್ ಮೇಲೆ ಮಂಗಳೂರು ನಗರದ ಬರ್ಕೆ, ಮೂಡುಬಿದಿರೆ, ಪಣಂ ಬೂರು, ಸುರತ್ಕಲ್ ಠಾಣೆ ಸೇರಿದಂತೆ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಠಾಣೆಯಲ್ಲಿ ಸುಮಾರು 9 ಪ್ರಕರಣಗಳು ದಾಖಲಾಗಿವೆ.
Police in Mangaluru have busted two illegal slaughterhouses operating in Moodbidri and Suratkal, seizing around 280 kilograms of beef and rescuing three cows. In Moodbidri’s Gantalkatte area, police raided the residence of Jaleel Kallabettu after receiving a tip-off about cow slaughter taking place behind his house.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm