ಬ್ರೇಕಿಂಗ್ ನ್ಯೂಸ್
09-10-25 05:30 pm Mangalore Correspondent ಕ್ರೈಂ
ಉಳ್ಳಾಲ, ಅ.9 : ಆಭರಣಗಳನ್ನ ಪಾಲಿಶಿಂಗ್ ಮಾಡಿಸುವ ಸೋಗಿನಲ್ಲಿ ಬಂದ ಅಪರಿಚಿತ ಮಧ್ಯ ವಯಸ್ಕನೋರ್ವ ವಿಧವೆಯೋರ್ವರನ್ನ ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನ ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ಎಂಬ ವಿಧವೆ ವಂಚಕನಿಂದ ಮೋಸ ಹೋದವರು. ಸುಂದರಿಯವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಮನೆಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು. ನಿನ್ನೆಯೂ ಕೆಲಸಕ್ಕೆ ತೆರಳಿದ್ದ ಸುಂದರಿ ಅವರು ಬೆಳಗ್ಗೆ 11.30ಕ್ಕೆ ಬೇಗನೆ ಕೆಲಸ ಮುಗಿಸಿ ಹಿಂತಿರುಗಿದ್ದಾರೆ. ಅವರು ಮನೆಯ ಕಡೆ ತೆರಳುತ್ತಿದ್ದ ವೇಳೆ ಅಂಬ್ಲಮೊಗರುವಿನ ಕಂಬಳ ಗದ್ದೆಯ ನಿರ್ಜನ ಪ್ರದೇಶದಲ್ಲಿ ಓರ್ವ ಅಪರಿಚಿತ ಮಧ್ಯ ವಯಸ್ಕ ಎದುರಾಗಿದ್ದು ಈ ಭಾಗದಲ್ಲಿ ಎಷ್ಟು ಮನೆಗಳು ಇವೆಯೆಂದು ಸುಂದರಿಯವರಲ್ಲಿ ವಿಚಾರಿಸಿದ್ದಾನೆ.
ಈ ವೇಳೆ ಆತ ತನ್ನಲ್ಲಿದ್ದ ಬ್ಯಾಗಿನಿಂದ ಚಿನ್ನವನ್ನ ಹೋಲುವ ಬಲೆಯೊಂದನ್ನ ಹೊರತೆಗೆದು ತೋರಿಸಿ ತಾನು ಈ ರೀತಿ ಹೊಳಪು ಬರುವಂತೆ ಚಿನ್ನಾಭರಣಗಳನ್ನ ಪಾಲಿಶ್ ಮಾಡುತ್ತೇನೆಂದು ಹೇಳಿಕೊಂಡಿದ್ದು, ಸುಂದರಿ ಅವರ ಕತ್ತಲ್ಲಿದ್ದ ಚಿನ್ನದ ಸರವನ್ನ ಪಾಲಿಶ್ ಮಾಡಿಕೊಡುವುದಾಗಿ ಹೇಳಿದ್ದಾನೆ. ಆರಂಭದಲ್ಲಿ ನಿರಾಕರಿಸಿದ ಮಹಿಳೆ ಬಳಿಕ 18 ಗ್ರಾಂ ತೂಗುವ ಚಿನ್ನದ ಸರವನ್ನ ಕತ್ತಿನಿಂದ ತೆಗೆದು ಅಪರಿಚಿತನಿಗೆ ನೀಡಿದ್ದಾರೆ. ಅಪರಿಚಿತ ಸರವನ್ನ ಯಾವುದೋ ನೀರಲ್ಲಿ ಸ್ವಲ್ಪ ಹೊತ್ತು ಅದ್ದಿ ತೆಗೆದು ಮಹಿಳೆಗೆ ಹಿಂತಿರುಗಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸರದ ಗಾತ್ರ ಇದ್ದಕ್ಕಿದ್ದಂತೆ ಕಡಿಮೆ ಆದುದನ್ನ ಕಂಡು ವಿಚಲಿತರಾದ ಮಹಿಳೆ ಸರವನ್ನ ಮಾಪನದಲ್ಲಿ ಪರಿಶೀಲಿಸಿದಾಗ ಅದರಲ್ಲಿ 14 ಗ್ರಾಂನಷ್ಟು ಚಿನ್ನವು ಕರಗಿಹೋಗಿದ್ದು, ತಾನು ಮೋಸ ಹೋಗಿರುವ ಬಗ್ಗೆ ಆಕೆಗೆ ಅರಿವಾಗಿದೆ.
ಅಂಬ್ಲಮೊಗರು ಪ್ರದೇಶದ ಜನರು ಮಹಿಳೆಯ ಚಿನ್ನವನ್ನ ತೊಳೆದು ಯಾಮಾರಿಸಿದ ವ್ಯಕ್ತಿಯನ್ನ ಹುಡುಕಾಟ ನಡೆಸಿದ್ದು ಅಷ್ಟರಲ್ಲೇ ಅಲ್ಲಿಂದ ಎಸ್ಕೇಪ್ ಆಗಿದ್ದ. ನಿನ್ನೆ ಸಂಜೆ ಸುಂದರಿ ಅವರು ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಚಿನ್ನ , ಬೆಳ್ಳಿಯ ಆಭರಣಗಳನ್ನ ತೊಳೆದು ಕೊಡುವ ನೆಪದಲ್ಲಿ ವಂಚಕರು ನಿಮ್ಮ ಮನೆಗೂ ಭೇಟಿ ನೀಡಬಹುದು. ಆ ರೀತಿಯ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ 112/100 ತುರ್ತು ಪೊಲೀಸ್ ಸಹಾಯವಾಣಿಗೆ ಕರೆ ಮಾಡುವಂತೆ ಕೊಣಾಜೆ ಪೊಲೀಸರು ಎಚ್ಚರಿಸಿದ್ದಾರೆ.
A widowed woman from Amblamogaru in Ullal taluk was cheated by an unidentified middle-aged man who, under the guise of polishing jewellery, melted away 14 grams of gold from her necklace and fled with it on Wednesday.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am