ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm