ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm