ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm