ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am