ಬ್ರೇಕಿಂಗ್ ನ್ಯೂಸ್
15-10-25 04:51 pm Bangalore Correspondent ಕ್ರೈಂ
ಬೆಂಗಳೂರು, ಅ.15 : ಹುಷಾರಿಲ್ಲದ ವೈದ್ಯ ಪತ್ನಿಯನ್ನು ವಿಕ್ಟೋರಿಯಾ ಆಸ್ಪತ್ರೆಯ ಸರ್ಜನ್ ವೈದ್ಯನೊಬ್ಬ ತಾನೇ ಕೈಯಾರೆ ಇಂಜೆಕ್ಷನ್ ನೀಡಿ ಕೊಂದು ಕುಟುಂಬಸ್ಥರ ಮುಂದೆ ಸಹಜ ಸಾವೆಂದು ನಾಟಕವಾಡಿದ ಘಟನೆ ಆರು ತಿಂಗಳ ನಂತರ ಬೆಳಕಿಗೆ ಬಂದಿದೆ. ಕೊಲೆ ನಡೆದ 6 ತಿಂಗಳ ನಂತರ ಆರೋಪಿ ಡಾ. ಮಹೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
2024ರ ಮೇ 26ರಂದು ಡಾ.ಮಹೇಂದ್ರ ರೆಡ್ಡಿ ಮತ್ತು ಡಾ.ಕೃತಿಕಾ ರೆಡ್ಡಿ ವಿವಾಹ ನಡೆದಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿದ್ದ ಡಾ.ಕೃತಿಕಾ ರೆಡ್ಡಿ, ಅಜೀರ್ಣ, ಗ್ಯಾಸ್ಟ್ರಿಕ್, ಲೋ ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಆರೋಗ್ಯ ಸಮಸ್ಯೆ ವಿಷಯವನ್ನು ಮುಚ್ಚಿಟ್ಟು ಕುಟುಂಬಸ್ಥರು ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ.ಮಹೇಂದ್ರ ರೆಡ್ಡಿಗೆ ಮದುವೆ ಮಾಡಿದ್ದರು. ಆದರೆ, ತದನಂತರ ಹೆಂಡತಿಯ ಆರೋಗ್ಯ ಸಮಸ್ಯೆ ವಿಷಯ ಪತಿಗೆ ತಿಳಿದುಬಂದಿತ್ತು. ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲ್ಲಲು ಮಹೇಂದ್ರ ರೆಡ್ಡಿ ಆಗಲೇ ಪ್ಲ್ಯಾನ್ ಮಾಡಿದ್ದ.
ಹುಷಾರಿಲ್ಲದ ಕಾರಣ ತವರು ಮನೆಗೆ ಹೋಗಿ ಮಲಗಿದ್ದ ವೈದ್ಯೆ ಡಾ.ಕೃತಿಕಾರೆಡ್ಡಿಯನ್ನು ನೋಡಲು ಅಲ್ಲಿಗೆ ಬಂದಿದ್ದ ಪತಿರಾಯ ಆಕೆಗೆ ಐವಿ ಇಂಜೆಕ್ಷನ್ ಮೂಲಕ ಎರಡು ದಿನ ಒಂದಷ್ಟು ಔಷಧ ನೀಡಿದ್ದ. ಬಳಿಕ ಜ್ಞಾನ ತಪ್ಪಿದ್ದ ಕೃತಿಕಾರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅದಾಗಲೇ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ಘಟನೆ ಬಗ್ಗೆ ಅಸ್ಪತ್ರೆಯಿಂದ ಡೆತ್ ಮೆಮೊ ಬಂದ ಬೆನ್ನಲ್ಲೇ ಅಸಹಜ ಸಾವು ಎಂದು ಗೊತ್ತಾಗಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಈ ಬಗ್ಗೆ ದೂರು ನೀಡುವಂತೆ ಕುಟುಂಬಸ್ಥರಿಗೆ ತಿಳಿಸಿದ್ದರು. ದೂರಿನ ಅನ್ವಯ ಯುಡಿಆರ್ ದಾಖಲು ಮಾಡಿದ್ದ ಮಾರತಹಳ್ಳಿ ಪೊಲೀಸರು, ಮೃತದೇಹದ ಸ್ಯಾಂಪಲ್ ಪಡೆದು FSLಗೆ ಕಳುಹಿಸಿದ್ದರು. ಈಗ ಅದರ ವರದಿ ಕೈಸೇರಿದ್ದು, ಕೃತಿಕಾ ಸಾವಿಗೆ ದೇಹದಲ್ಲಿ ಕಂಡುಬಂದಿರುವ ಅನಸ್ತೇಶಿಯಾ ಅಂಶ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಅಸಹಜ ಸಾವು ಪ್ರಕರಣವನ್ನು ಕೊಲೆಯೆಂದು ಪರಿವರ್ತಿಸಿರೋ ಪೊಲೀಸರು ಆರೋಪಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ.
In a shocking case from Bengaluru, Victoria Hospital surgeon Dr. Mahendra Reddy has been arrested for allegedly killing his wife, dermatologist Dr. Kruthika Reddy, by administering a fatal injection. The murder, disguised as a natural death, occurred just months after their marriage in May 2024 and came to light six months later following an FSL report.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am