ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm