ಬ್ರೇಕಿಂಗ್ ನ್ಯೂಸ್
17-10-25 11:56 am Mangalore Correspondent ಕ್ರೈಂ
ಪುತ್ತೂರು, ಅ.17 : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಶಾಖೆಯ ಮ್ಯಾನೇಜರ್ ಪವಿತ್ರ ಎನ್. ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆರೋಪಿ ಅಬ್ದುಲ್ ರಮೀಜ್ ಎಂಬಾತ ಎರಡು ಬಾರಿ ಸಹಕಾರಿ ಸಂಘದ ಪುತ್ತೂರು ಶಾಖೆಗೆ ಬಂದು ಒಟ್ಟು 104.170 ಗ್ರಾಂ ಚಿನ್ನಾಭರಣ ಅಡವಿಟ್ಟು 9,25,000 ರೂ. ಸಾಲವಾಗಿ ಪಡೆದುಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅ.4ರಂದು ಶಾಖೆಗೆ ಬಂದ ಅಬ್ದುಲ್ ರಮೀಜ್ 17.100 ಗ್ರಾಂ ತೂಕದ 1 ಚಿನ್ನದ ಬ್ರಾಸ್ಕೆಟ್ ಮತ್ತು 34.390 ಗ್ರಾಂ ತೂಕದ 2 ಚೈನ್ ನೀಡಿದ್ದ. ಶಾಖೆಯಲ್ಲಿ ಚಿನ್ನ ಪರೀಕ್ಷಿಸುವ ಸುಭಾಷ್ ರೈ ಅವರನ್ನು ಬರಮಾಡಿಕೊಂಡು ಚಿನ್ನ ಪರಿಶೀಲಿಸಿದ ಪ್ರಕಾರ ಈ ಚಿನ್ನಾಭರಣಕ್ಕೆ 4,50,000 ರೂ. ಸಾಲ ಮಂಜೂರು ಮಾಡಿದ್ದರು. 1,99,000 ರೂ. ನಗದು ರೂಪದಲ್ಲಿ ನೀಡಿ, ಉಳಿದ 2,51,000 ರೂ.ಗಳನ್ನು ಆತನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿತ್ತು.
ಅ.8ರಂದು ಮತ್ತೊಮ್ಮೆ ಬಂದ ಅಬ್ದುಲ್ ರಮೀಜ್ 52.870 ಗ್ರಾಂ ತೂಕದ ಚಿನ್ನಾಭರಣ ತಂದಿದ್ದ. ಇದರಲ್ಲಿ 1 ಜತೆ ಚಿನ್ನದ ಕಾಲು ಚೈನ್ ಮತ್ತು ಒಂದು ಚಿನ್ನದ ಚೈನ್ ಇತ್ತು. ಇದನ್ನು ಕೂಡ ಸುಭಾಷ್ ರೈ ಮೂಲಕ ಪರಿಶೀಲಿಸಿ 4,75,000 ರೂ. ಸಾಲ ಮಂಜೂರು ಮಾಡಿದ್ದರು. ಇದರಲ್ಲಿ 1,99,000 ರೂ. ನಗದು ರೂಪದಲ್ಲಿಯೂ, 2,67,000 ರೂ.ಗಳನ್ನು ಆತನ ಬ್ಯಾಂಕ್ ಖಾತೆಗೂ ವರ್ಗಾಯಿಸಿದ್ದರು.
ಅ.13ರಂದು ಪತ್ರಿಕೆಗಳಲ್ಲಿ ಅಬ್ದುಲ್ ರಮೀಜ್ ಮತ್ತು ಇತರರು ಸೇರಿಕೊಂಡು ಮಂಗಳೂರಿನಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಬೇರೊಂದು ಸಹಕಾರಿ ಸಂಘಕ್ಕೆ ವಂಚನೆ ಮಾಡಿದ ಸುದ್ದಿ ಓದಿದಾಗ ಸಂಶಯಗೊಂಡ ಶಾಖಾ ಮ್ಯಾನೇಜರ್, ಕೇಂದ್ರ ಕಚೇರಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಒಪ್ಪಿಗೆ ಪಡೆದು ಅಬ್ದುಲ್ ರಮೀಜ್ ಅಡಮಾನ ಇರಿಸಿದ್ದ ಎಲ್ಲ ಚಿನ್ನಾಭರಣಗಳನ್ನು ಮಂಗಳೂರಿನ ಟೆಸ್ಟಿಂಗ್ ಸೆಂಟರ್ನಲ್ಲಿ ಪರಿಶೀಲನೆಗೆ ಒಳಪಡಿಸಿದಾಗ ಅವೆಲ್ಲವೂ ನಕಲಿ ಎಂಬುದು ತಿಳಿದುಬಂದಿದೆ. ಶಾಖಾ ಮ್ಯಾನೇಜರ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಬ್ದುಲ್ ರಮೀಜ್ ಮತ್ತು ಇತರರು ಇದೇ ರೀತಿ ನಕಲಿ ಚಿನ್ನ ಅಡವಿಟ್ಟು ವಂಚಿಸಿದ ಬಗ್ಗೆ ಇತ್ತೀಚೆಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಚಿನ್ನದಂತೆ ತೋರುವ ನಕಲಿ ಚಿನ್ನವನ್ನು ಅಡವಿರಿಸಿ ವಂಚಿಸುವ ಜಾಲ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕವಾಗಿದ್ದು ಕಳೆದ ಎರಡು ವರ್ಷಗಳಲ್ಲಿ ಕೊಡಗು ಸೇರಿ ಹಲವಾರು ಕಡೆ ವಂಚನೆ ಪ್ರಕರಣ ದಾಖಲಾಗಿದೆ.
A gold loan fraud has come to light at the Odiyoor Sri Vividoddesha Souharda Cooperative Society’s Puttur branch, where a man identified as Abdul Rameez allegedly pledged fake gold ornaments to secure loans totaling ₹18.5 lakh. The branch manager, Pavithra N., lodged a complaint at the Puttur Town Police Station after discovering the deception.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm