ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm