ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm