ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm