ಬ್ರೇಕಿಂಗ್ ನ್ಯೂಸ್
18-10-25 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಇಲ್ಲಿನ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲೂ ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಘಟನೆ ನಡೆದಿದೆ. ಅಬ್ದುಲ್ ರಮೀಜ್ ಎಂಬಾತ ರೂ. 4,75,750 ಸಾಲ ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಫರ್ಡ್ ಪಾಯಸ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ಪಾಯಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಅಬ್ದುಲ್ ರಮೀಜ್ ಎಂಬಾತ 2025 ಸೆಪ್ಟೆಂಬರ್ ತಿಂಗಳ 9 ರಂದು ಮತ್ತು ಅಕ್ಟೋಬರ್ ತಿಂಗಳ 8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900 ಗ್ರಾಂ ಮತ್ತು 33.910 ಗ್ರಾಂ ತೂಕದ ಚಿನ್ನಾಭರಣವೆಂದು ನಂಬಿಸಿ ಚಿನ್ನವನ್ನು ಅಡವಿಟ್ಟು, ಕ್ರಮವಾಗಿ ರೂ. 1,91,000 ರೂ ಮತ್ತು ರೂ. 2,84,750 ರೂ. ಸಾಲ ಪಡೆದಿದ್ದಾನೆ. ಅ.14 ರಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಅಬ್ದುಲ್ ರಮೀಜ್ ಮಂಗಳೂರಿನ ಇತರೇ ಸಹಕಾರಿ ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ಮೋಸ ಮಾಡಿರುವ ವಿಚಾರ ತಿಳಿದುಬಂದಿತ್ತು.
ಇದರಿಂದ ಸಂಶಯಗೊಂಡು ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಆರೋಪಿ ಇಟ್ಟಿದ್ದ ಚಿನ್ನವನ್ನು ಪರಿಶೀಲಿಸಿದಾಗ ನಕಲಿ ಎಂಬುದು ಪತ್ತೆಯಾಗಿತ್ತು. ಒಟ್ಟು 56.810 ಗ್ರಾಂ ತೂಕದ ನಕಲಿ ಚಿನ್ನಾಭರ ಇಟ್ಟಿದ್ದು ರೂ.4,75,750 ಸಾಲ ಪಡೆದಿದ್ದಾನೆ. ಬ್ಯಾಂಕ್ ವ್ಯವಸ್ಥಾಪಕರ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಕಾವೂರಿನ ಆತ್ಮಶಕ್ತಿ ಸಹಕಾರಿ ಸಂಘ ಮತ್ತು ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಇದೇ ಅಬ್ದುಲ್ ರಮೀಜ್ ನಕಲಿ ಚಿನ್ನ ಇಟ್ಟು ದೊಡ್ಡ ಮೊತ್ತದ ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
The Belthangady branch of Ujire Anugraha Multipurpose Co-operative Society has become the latest victim of a fake gold loan scam involving Abdul Rameez of Puttur. The accused allegedly pledged fake gold ornaments weighing 56.810 grams and obtained a loan of ₹4,75,750 from the society.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm