ಬ್ರೇಕಿಂಗ್ ನ್ಯೂಸ್
18-10-25 03:48 pm Mangalore Correspondent ಕ್ರೈಂ
ಪುತ್ತೂರು, ಅ.18: ಪುತ್ತೂರಿನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ಇಬ್ಬರು ಟ್ರಾಫಿಕ್ ಪೊಲೀಸರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧಿಸಿ ಪರಿಶೀಲನೆ ಬಳಿಕ ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್, ಹಲ್ಲೆ ನಡೆಸಿರುವ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಪುತ್ತೂರಿನ ದರ್ಬೆಯಲ್ಲಿ ಆಟೋ ಚಾಲಕ ಬಶೀರ್ ಎಂಬಾತ ಸಮವಸ್ತ್ರ ಧರಿಸದೇ ಆಟೋ ಚಲಾಯಿಸಿಕೊಂಡು ತೆರಳುತ್ತಿದ್ದಾಗ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರಿ ಠಾಣೆಯ ಎಎಸ್ಐ ಚಿದಾನಂದ ರೈ ಮತ್ತು ಪೇದೆ ಶ್ರೀಶೈಲ ಎಂ.ಕೆ ಅವರು ನಿಲ್ಲಿಸಲು ಸೂಚಿಸಿದ್ದಾರೆ. ನಿಲ್ಲಿಸದೇ ಇದ್ದಾಗ ಟ್ರಾಫಿಕ್ ಪೊಲೀಸರು ಬೈಕಿನಲ್ಲಿ ಹಿಂಬಾಲಿಸಿ ಅಡ್ಡಗಟ್ಟಿದ್ದು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.



ಬೈಕಿನಲ್ಲಿ ಅಡ್ಡಗಟ್ಟುವುದು ಮತ್ತು ಹಲ್ಲೆ ನಡೆಸಿದ ಘಟನೆಯನ್ನು ಸ್ವತಃ ಬಶೀರ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿತ್ತು. ವಿಡಿಯೋ ಆಧರಿಸಿ ಜಿಲ್ಲಾ ಎಸ್ಪಿಯವರು ಕರ್ತವ್ಯ ಲೋಪ ಎಸಗಿದ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಬಶೀರ್ ಹೇಳಿಕೆಯ ಪ್ರಕಾರ, ಫಿಲೋಮಿನಾ ಕಾಲೇಜು ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ದಿನವೂ ವಾಹನಗಳನ್ನು ಅಡ್ಡಗಟ್ಟಿ ದಂಡ ವಿಧಿಸುತ್ತಾರೆ. ನಿನ್ನೆ ಆಟೋ ನಿಲ್ಲಿಸದೇ ಇದ್ದಾಗ ಇಬ್ಬರು ಪೊಲೀಸರು ಹಿಂಬಾಲಿಸಿ ಬಂದು ಅಡ್ಡಗಟ್ಟಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಘಟನೆ ಸಂಬಂಧಿಸಿ ಸಮವಸ್ತ್ರ ಧರಿಸದಿರುವುದು ಮತ್ತು ಪೊಲೀಸರ ಸೂಚನೆ ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಶೀರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.
Auto driver assaulted by two traffic cops after being stopped for not wearing uniform; video goes viral. SP Dr. Arun suspends ASI Chidananda Rai & constable Shreeshail M.K. for dereliction of duty. A case also filed against driver Basheer for non-compliance. #Puttur #mangalore pic.twitter.com/Yw7GUNznvc
— Headline Karnataka (@hknewsonline) October 18, 2025
A shocking incident from Puttur has gone viral after a video surfaced showing two traffic policemen assaulting an auto driver. Following an internal inquiry, Dakshina Kannada SP Dr. Arun has suspended Traffic ASI Chidananda Rai and Constable Shreeshaila M.K. for misconduct.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm