ಬ್ರೇಕಿಂಗ್ ನ್ಯೂಸ್
20-10-25 12:25 pm Mangalore Correspondent ಕ್ರೈಂ
ಉಳ್ಳಾಲ, ಅ.20 : ಕುಂಪಲದ ಬಾಡಿಗೆ ಮನೆಯೊಂದರಲ್ಲಿ ಹದಿನೇಳರ ಅಪ್ರಾಪ್ತೆಯ ಮೇಲೆ ಆಕೆಯ ಮಲ ತಂದೆಯೇ ನಿರಂತರ ಅತ್ಯಾಚಾರವೆಸಗಿರುವ ಹೇಯ ಕೃತ್ಯವು ತಡವಾಗಿ ಬೆಳಕಿಗೆ ಬಂದಿದ್ದು, ಉಳ್ಳಾಲ ಪೊಲೀಸರು ಕಾಮುಕ ತಂದೆಯನ್ನ ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಪ್ರಸ್ತುತ ಉಳ್ಳಾಲ ಮಾಸ್ತಿಕಟ್ಟೆಯ ಬಾಡಿಗೆ ಮನೆಯಲ್ಲಿ ನೆಲೆಸಿರುವ ಅಮೀರ್(40) ಎಂಬಾತನೇ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆ ಮೂರು ವರ್ಷದವಳಾಗಿದ್ದಾಗಳೇ ಆಕೆಯ ತಂದೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆಗೆ ಆರು ವರ್ಷ ತುಂಬಿದಾಗ ಆಕೆಯ ತಾಯಿ ಪಾವೂರಿನ ಅಮೀರ್ ಎಂಬಾತನನ್ನ ಮದುವೆಯಾಗಿ ಆರಂಭದಲ್ಲಿ ಕೆ.ಸಿ ರೋಡ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಬಳಿಕ ಕುಂಪಲ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ಸಂತ್ರಸ್ತೆಯ ಕುಟುಂಬ ನೆಲೆಸಿತ್ತು.
ಸಂತ್ರಸ್ತೆ ಏಳು ವರ್ಷದ ಬಾಲಕಿಯಾಗಿದ್ದಾಗಲೇ ರಾತ್ರಿ ವೇಳೆ ತಾಯಿ ಜೊತೆ ಮಲಗಿದ್ದ ಸಂದರ್ಭದಲ್ಲಿ ಮಲ ತಂದೆ ಅಮೀರ್ ಮಗಳ ಮೇಲೆರಗಿದ್ದ. ಈ ಸಂದರ್ಭ ಅಪ್ರಾಪ್ತೆಯು ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು ಇಟ್ಟು ಬಲತ್ಕಾರದಿಂದ ಅತ್ಯಾಚಾರವೆಸಗಿದ್ದ. ಅಕ್ಕರೆಯಿಂದ ಮುದ್ದಾಡಬೇಕಿದ್ದ ತಂದೆಯೇ ತನ್ನ ಮೇಲೆ ಅತ್ಯಾಚಾರವೆಸಗಿದ ಕಹಿ ಘಟನೆಯ ಬಳಿಕ ಸಂತ್ರಸ್ತೆಯು ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಅಜ್ಜಿ ಮನೆಯಲ್ಲೇ ನೆಲೆಸಿ ಅಲ್ಲಿಂದಲೇ ಶಾಲೆಗೆ ಹೋಗುತ್ತಿದ್ದಳು. ಕೆಲ ಸಮಯದ ಬಳಿಕ ಅಪ್ರಾಪ್ತೆಯು ತಾಯಿಯ ಒತ್ತಾಸೆ ಮೇರೆಗೆ ಮಲತಂದೆ ಇರುವಾಗಲೇ ಕುಂಪಲದ ಬಾಡಿಗೆ ಮನೆಗೆ ಬಂದು ತಾಯಿಯ ಯೋಗ ಕ್ಷೇಮ ವಿಚಾರಿಸುತ್ತಿದ್ದಳು. ಈ ವೇಳೆ ಕಾಮುಕ ಅಮೀರ್ ಸಮಯ ಸಾಧಿಸಿ ಮಗಳಿಗೆ ಹನ್ನೆರಡು ವರುಷ ತುಂಬುವವರೆಗೂ ನಿರಂತರ ಅತ್ಯಾಚಾರ ಎಸಗಿದ್ದನೆನ್ನಲಾಗಿದೆ.
ಅಪ್ರಾಪ್ತೆಯು ತನಗೆ ಹನ್ನೆರಡು ವರುಷ ತುಂಬಿದಾಗ ಅಪ್ಪ ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿದ ವಿಚಾರವನ್ನ ತಾಯಿಯಲ್ಲಿ ತಿಳಿಸಿದ್ದಳು. ತಾಯಿಯು ಮನೆಯ ಮರ್ಯಾದಿ ಹರಾಜಾಗುತ್ತದೆಂದು ಹೇಳಿ ಮಗಳನ್ನ ಸುಮ್ಮನಾಗಿಸಿದ್ದಳು. ಕಳೆದ ಅಕ್ಟೋಬರ್ 18ರ ಶನಿವಾರ ಅಪ್ರಾಪ್ತೆಯು ಮಾನಸಿಕವಾಗಿ ನೊಂದುಕೊಂಡಿದ್ದು, ಆಕೆಯನ್ನ ಮನೆಯವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿಯನ್ನ ಕೌನ್ಸೆಲಿಂಗ್ ನಡೆಸಿದ ವೈದ್ಯರಲ್ಲಿ ತನ್ನ ಮೇಲೆ ಮಲ ತಂದೆ ನಡೆಸಿರುವ ನಿರಂತರ ಅತ್ಯಾಚಾರದ ಬಗ್ಗೆ ಬಾಲಕಿ ಹೇಳಿಕೊಂಡಿದ್ದಾಳೆ. ವೈದ್ಯಕೀಯ ದಾಖಲೆ ಆಧರಿಸಿ ಕಾರ್ಯ ಪೃವೃತ್ತರಾದ ಉಳ್ಳಾಲ ಪೊಲೀಸರು ಭಾನುವಾರ ಆರೋಪಿ ಅಮೀರ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
The heinous act of repeatedly raping a seventeen-year-old minor in a rented house in Kumpala by her stepfather has come to light late, and the Ullal police have arrested the amorous father under the POCSO Act.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am