ಬ್ರೇಕಿಂಗ್ ನ್ಯೂಸ್
21-10-25 05:12 pm Mangalore Correspondent ಕ್ರೈಂ
ಮಂಗಳೂರು, ಅ.21 : ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ಅಪಾರ್ಟ್ಮೆಂಟಿನ ಮೂರು ಮನೆಗಳಿಗೆ ರಾತ್ರಿ ವೇಳೆ ಕಳ್ಳರು ನುಗ್ಗಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿಗಳನ್ನು ಕಳವುಗೈದ ಘಟನೆ ನಡೆದಿದ್ದು ಉರ್ವಾ ಪೊಲೀಸರು ಶೀಘ್ರ ಕಾರ್ಯಾಚರಣೆಯಲ್ಲಿ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21) ಎಂದು ಗುರುತಿಸಲಾಗಿದೆ.
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಅ.19ರಂದು ರಾತ್ರಿ ಮೂರು ಫ್ಲಾಟ್ ಗಳಿಗೆ ಏಕಕಾಲದಲ್ಲಿ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಮಲಗಿದ್ದಾಗಲೇ ಕಿಚನ್ ವಿಂಡೋ ಮೂಲಕ ನುಗ್ಗಿದ್ದ ಕಳ್ಳರು, ಮೂರು ಮನೆಗಳಿಂದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ರೂ.5000 ನಗದು ಹಣ, 3000 ದಿರ್ಹಮ್ ಹಾಗೂ ಮೊಬೈಲ್ ಫೋನನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ 104/2025 ಕಲಂ 331(4), 305(ಎ) ಬಿಎನ್ಎಸ್ ಅಂತೆ ಪ್ರಕರಣ ದಾಖಲಾಗಿತ್ತು. ಮೂರು ಕಡೆ ಕಳವಾಗಿದ್ದರೂ ಒಂದೇ ಎಫ್ಐಆರ್ ನಲ್ಲಿ ತೋರಿಸಲಾಗಿತ್ತು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದಾರೆ. ಪ್ರಕರಣ ದಾಖಲಾಗಿ ಕೇವಲ 20 ಗಂಟೆಯಲ್ಲಿ ಕಳವಿನಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದು ಆರೋಪಿಗಳಿಂದ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣ, ರೂ 5000/- ನಗದು ಹಣ, ರೂ. 70,000/- ಬೆಲೆಯ 3000 ದಿರ್ಹಮ್ ವಿದೇಶಿ ಕರೆನ್ಸಿ ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಅಭಿಜಿತ್ ದಾಸ್ ಮೇಲೆ ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಕಡೆ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿಗಳು ಬೆಂಗಳೂರಿಗೆ ತೆರಳಿದ ಖಚಿತ ಮಾಹಿತಿಯಂತೆ, ಬೆಂಗಳೂರು ಪೊಲೀಸರ ಸಹಕಾರದಿಂದ ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ವಶಕ್ಕೆ ಪಡೆದು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Thieves broke into three apartments at Lalbagh Hat Hill in Mangaluru while the residents were asleep, stealing around ₹20 lakh worth of gold ornaments, cash, and foreign currency. Urwa police cracked the case within 20 hours, arresting two Assam-origin suspects — Abhijit Das (24) and Deba Das (21) — in Bengaluru.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm