ಬ್ರೇಕಿಂಗ್ ನ್ಯೂಸ್
23-10-25 05:20 pm Bangalore Correspondent ಕ್ರೈಂ
ಬೆಂಗಳೂರು, ಅ 23 : ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.


ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್ಪೆಕ್ಟರ್ ಸುನೀಲ್ ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್ಗಳು ಬಿಚ್ಚಿಟ್ಟಿವೆ.
ಇನ್ನು ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ನಡೆಸಿರುವ ಆರೋಪವನ್ನು ಮಹಿಳೆ ಮಾಡಿದ್ದಾರೆ. ನಮ್ಮ ವಿಚಾರವನ್ನು ಯಾರಿಗಾದರೂ ಹೇಳಿದರೇ ಕೊಲೆ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾರಂತೆ. ಪ್ರತಿ ಭಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಂತ್ರಸ್ಥೆ ನಡುವೆ ವಾಟ್ಸಾಫ್ ಚಾಟಿಂಗ್ ಕೂಡ ನಡೆದಿದೆ. ತನ್ನ ಮನೆ ಲೊಕೇಷನ್ ಶೇರ್ ಮಾಡಿ ಮನೆಗೆ ಬರುವಂತೆ ಆಹ್ವಾನ…ಕೂಡ ನೀಡಿದ್ದಾರೆ. ಮನೆಯಲ್ಲಿ ಹೆಂಡತಿ , ಮಕ್ಕಳಿಲ್ಲ, ನನ್ನ ಮನೆಗೆ ಬಾ ಎಂದು ಇನ್ಸ್ ಪೆಕ್ಟರ್ ಮೆಸೇಜ್…ಮಾಡಿದ್ದಾರೆ. ಯು ಆರ್ ಲವ್ ಮೈ ಸ್ವೀಟ್ ಹಾರ್ಟ್ ಅಂಥ ಯುವತಿಯಿಂದಲೂ ಮೆಸೇಜ್ ಮಾಡಲಾಗಿದೆ. ಚಿನ್ನಿ, ಮಿಸ್ ಯೂ ಅಂಥ ಸಂತ್ರಸ್ಥೆಯಿಂದಲೂ ಮೆಸೇಜ್…ಮಾಡಲಾಗಿದೆ. ಅದಕ್ಕೆ ಮೀ ಟೂ ಅಂಥ ಇನ್ಸ್ ಪೆಕ್ಟರ್ ರಿಪ್ಲೈ ಮಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಇಬ್ಬರ ನಡುವೆ ಮಾತುಕತೆಯೂ ನಡೆದಿದೆ. ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ಥ ಮಹಿಳೆಯ ನಡುವಿನ ವಾಟ್ಸಾಫ್ ಚಾಟಿಂಗ್ ಅನ್ನು ಮಹಿಳೆ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.
A shocking case has emerged in Bengaluru, where DJ Halli Police Inspector Sunil has been accused of raping and cheating a 36-year-old woman who had come to the police station regarding a financial dispute.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm