ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm