ಬ್ರೇಕಿಂಗ್ ನ್ಯೂಸ್
25-10-25 10:00 pm Bangalore Correspondent ಕ್ರೈಂ
ಬೆಂಗಳೂರು, ಅ.26 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳವು ಮಾಡಲಾದ ಚಿನ್ನವನ್ನು ಬಳ್ಳಾರಿಯ ಉದ್ಯಮಿ ರೊದ್ದಂ ಗೋವರ್ಧನ್ ಅವರ ಜುವೆಲ್ಲರಿಗೆ ಮಾರಾಟ ಮಾಡಿರುವುದನ್ನು ಕೇರಳ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಕೇರಳದ ಎಸ್ಐಟಿ ಪೊಲೀಸರು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಅರ್ಚಕ ಪೋಟಿ ಉನ್ನಿಕೃಷ್ಣನ್ ನಿವಾಸ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರ್ಸ್ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದಾರೆ. ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪದಡಿ ಪೋಟಿ ಉನ್ನಿಕೃಷ್ಣನ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದರು. ಕದ್ದ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಅವರಿಗೆ ಮಾರಾಟ ಮಾಡಿದ ಆರೋಪದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದೆ. ಇದೇ ವೇಳೆ, ಪೋಟಿ ಉನ್ನಿಕೃಷ್ಣನ್ ಅವರಿಂದ 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.
ಶಬರಿಮಲೆಯಲ್ಲಿ ಕಳ್ಳತನ ಆದ ಚಿನ್ನ ಎನ್ನುವುದು ಗೊತ್ತಿರದ ಕಾರಣ ನಾನು ಚಿನ್ನ ಖರೀದಿ ಮಾಡಿದ್ದೆ. ಕದ್ದಿದ್ದ ಚಿನ್ನ ಎಂದು ಗೊತ್ತಿದ್ದರೆ ಖರೀದಿ ಮಾಡುತ್ತಿರಲಿಲ್ಲ ಎಂದು ಗೋವರ್ಧನ್ ಕೇರಳ ಎಸ್ಐಟಿ ಮುಂದೆ ಹೇಳಿಕೊಂಡಿದ್ದಾರೆ. ಮುಂದೆ ತನಿಖೆಗೆ ಕರೆದಾಗ ಬರಬೇಕಾಗುತ್ತದೆ ಎಂದು ಹೇಳಿ ಅವರನ್ನು ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ.
Kerala Police have uncovered that stolen gold from the Sabarimala Ayyappa Temple was sold to a jeweller in Ballari, Karnataka. Acting on this lead, the Special Investigation Team (SIT) conducted raids in Bengaluru and Ballari, seizing 476 grams of gold and crucial documents.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm