ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm