ಬ್ರೇಕಿಂಗ್ ನ್ಯೂಸ್
29-10-25 10:09 pm Bangalore Correspondent ಕ್ರೈಂ
ಬೆಂಗಳೂರು, ಅ 29 : ವರ್ತೂರು ಮತ್ತು ಬೆಳ್ಳಂದೂರಿನ ಕ್ರೋಮಾ ಶೋ ರೂಮ್ಗೆ ನುಗ್ಗಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಿಕ್ಕಿಂನ ದಿವಾಸ್ ಕಮಿ (22) ಮತ್ತು ಆತನ ಪ್ರೇಯಸಿ, ನೇಪಾಳದ ಅಸ್ಮಿತಾ(26), ದಿವಾಸ್ ಕಮಿ ಸ್ನೇಹಿತ ಅರೋಹಣ್ ತಾಪಾ (24) ಬಂಧಿತರು.
ಆರೋಪಿಗಳಿಂದ ₹40 ಲಕ್ಷ ಮೌಲ್ಯದ 39 ಮೊಬೈಲ್ಗಳು, ಡಿಜಿಟಲ್ ವಾಚ್ಗಳು, ಚಿನ್ನಾಭರಣ, ಕ್ಯಾಮೆರಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಸ್ವಿಗ್ಗಿ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದರು. ನೇಪಾಳದ ಅಸ್ಮಿತಾ ಅವರಿಗೆ ಮದುವೆಯಾಗಿದ್ದು, ಪತಿಯಿಂದ ದೂರವಾಗಿ ಒಂದು ವರ್ಷದಿಂದ ದಿವಾಸ್ ಕಮಿ ಜತೆಗೆ ಸಹ ಜೀವನ ನಡೆಸುತ್ತಿದ್ದರು. ಅಸ್ಮಿತಾ ಅವರು ಮನೆಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಫುಡ್ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದ ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಕ್ರೋಮಾ ಮೊಬೈಲ್ ಅಂಗಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಬೆಳ್ಳಂದೂರು ಮತ್ತು ವರ್ತೂರಿನಲ್ಲಿರುವ ಕ್ರೋಮಾ ಶೋ ರೂಮ್ಗಳ ಬಗ್ಗೆ ಇತ್ತೀಚೆಗೆ ಮಾಹಿತಿ ಸಂಗ್ರಹಿಸಿದ್ದರು. ಅಕ್ಟೋಬರ್ ಮೊದಲ ವಾರದಲ್ಲಿ ಬೆಳ್ಳಂದೂರಿನ ಕ್ರೋಮಾ ಶೋ ರೂಮ್ ಮತ್ತು ವರ್ತೂರಿನ ಕ್ರೋಮಾ ಶೋ ರೂಮ್ನಲ್ಲಿ ಮೊಬೈಲ್ ಕಳವು ಮಾಡಿ, ತುರ್ತು ನಿರ್ಗಮನ ಬಾಗಿಲು ತೆರೆದು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.
ಕಳವು ಮಾಡುತ್ತಿದ್ದ ದುಬಾರಿ ಬೆಲೆಯ ಮೊಬೈಲ್ಗಳನ್ನು ಅಸ್ಮಿತಾಳಿಗೆ ನೀಡುತ್ತಿದ್ದರು ಅಸ್ಮಿತಾ ತನಗೆ ಪರಿಚಯವಿದ್ದವರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮೊಬೈಲ್ ಮಾರಾಟ ಮಾಡಿದ್ದ ಹಣದಲ್ಲಿ ಎಂಟು ಗ್ರಾಂ ಚಿನ್ನ ಖರೀದಿಸಿದ್ದ ದಿವಾಸ್ ಕಮಿ, ಪ್ರೇಯಸಿಗೆ ನೀಡಿದ್ದರು. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದಿವಾಸ್ ಕಮಿ ತನ್ನ ಪ್ರೇಯಸಿ ಅಸ್ಮಿತಾಗಾಗಿಯೇ ಮೊಬೈಲ್ ಕಳ್ಳತನ ಮಾಡಿದ್ದೆ ಎಂಬುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
In a bizarre love-driven crime, a young man stole high-end mobile phones from Croma showrooms in Varthur and Bellandur — all to please his girlfriend. The Varthur Police have arrested the accused along with his lover and an accomplice.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am