ಬ್ರೇಕಿಂಗ್ ನ್ಯೂಸ್
29-10-25 10:43 pm Mangalore Correspondent ಕ್ರೈಂ
ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.
ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.
ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm