ಬ್ರೇಕಿಂಗ್ ನ್ಯೂಸ್
31-10-25 10:57 pm Mangalore Correspondent ಕ್ರೈಂ
ಮಂಗಳೂರು, ಅ.31 : ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಸುಹಾಸ್ ಶೆಟ್ಟಿಯನ್ನು 2025ರ ಮೇ 1ರಂದು ಬಜ್ಪೆಯಲ್ಲಿ ಜನರು ನೋಡುತ್ತಿದ್ದಾಗಲೇ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಸುಹಾಸ್ ಕೊಲೆ ಪ್ರಕರಣ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ಹಲವು ಸಮಯದಿಂದ ಹೊಂಚು ಹಾಕಿ ಜನರಲ್ಲಿ ಭಯ ಮೂಡಿಸುವುದಕ್ಕಾಗಿಯೇ ಈ ರೀತಿ ಭಯಾನಕವಾಗಿ ಕೊಲೆ ಮಾಡಲಾಗಿತ್ತು ಎಂದು ಎನ್ಐಎ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಪ್ರಕರಣದಲ್ಲಿ ದೇಶದ್ರೋಹಿ ಸಂಘಟನೆಗಳ ಪಾತ್ರ ಮತ್ತು ಟಾರ್ಗೆಟ್ ಮಾಡಿ ಹಿಂದು ಸಂಘಟನೆ ನಾಯಕರನ್ನು ಕೊಲ್ಲಲಾಗಿದೆ ಎಂಬ ಮಾಹಿತಿ ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿತ್ತು. ತನಿಖೆಯ ಸಂದರ್ಭದಲ್ಲಿ ಹಲವು ತಿಂಗಳುಗಳಿಂದ ಸುಹಾಸ್ ಶೆಟ್ಟಿ ಕೊಲ್ಲಲು ಪ್ರಬಲ ಸಂಚು ರೂಪಿಸಿರುವುದು ತಿಳಿದುಬಂದಿದೆ. ಸುಹಾಸ್ ತನ್ನ ಸಹಚರರ ಜೊತೆಗೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಬಜ್ಪೆಯಲ್ಲಿ ಮುಂದಿನಿಂದ ಮತ್ತೊಂದು ವಾಹನದಿಂದ ಡಿಕ್ಕಿಯಾಗಿಸಿ ಹೊರಬಂದ ಆತನಿಗೆ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿತ್ತು.
ಸುಹಾಸ್ ಶೆಟ್ಟಿ ಕೊಲೆ ನಡೆಸುವುದಕ್ಕಾಗಿ ನಿಷೇಧಿತ ಪಿಎಫ್ಐ ಸಂಘಟನೆಯ ಮಾಜಿ ಸದಸ್ಯ ಅಬ್ದುಲ್ ಸಫ್ವಾನ್ ಎಂಬಾತ ನಿಯಾಜ್, ಮುಹಮ್ಮದ್ ಮುಸಾಮಿರ್, ಮಹಮ್ಮದ್ ಮುಜಾಮಿಲ್, ಇನ್ನೊಬ್ಬ ಪಿಎಫ್ಐ ಸದಸ್ಯ ವಾಮಂಜೂರು ನೌಶಾದ್ ಮತ್ತು ಆದಿಲ್ ಮಹರೂಫ್ ಜೊತೆಗೂಡಿ ಸಂಚು ನಡೆಸಿದ್ದರು. ಕೃತ್ಯ ನಡೆಸುವುದಕ್ಕಾಗಿ ಆದಿಲ್ ಆರೋಪಿಗಳಿಗೆ ಹಣಕಾಸು ನೆರವು ನೀಡಿದ್ದ ಎಂದು ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ, ಚಿಕ್ಕಮಗಳೂರು ಮೂಲದ ಕಲಂದರ್ ಶಾಫಿ, ರಂಜಿತ್, ನಾಗರಾಜ, ಮಹಮ್ಮದ್ ರಿಜ್ವಾನ್, ಅಜರುದ್ದೀನ್, ಅಬ್ದುಲ್ ಖಾದರ್ ಅವರನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಆರೋಪ ಹೊರಿಸಲಾಗಿದೆ. ಇನ್ನೊಬ್ಬ ಆರೋಪಿ ಅಬ್ದುಲ್ ರಜಾಕ್ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಕೋರ್ಟಿಗೆ ಎನ್ಐಎ ತಿಳಿಸಿದೆ.
In connection with the murder of Bajrang Dal activist Suhas Shetty, the National Investigation Agency (NIA) has filed a charge sheet against 11 accused before the NIA Special Court in Bengaluru. The case has been registered under the UAPA (Unlawful Activities Prevention Act) and various sections of the Indian Penal Code.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm